ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಸಹಕಾರ ಸಂಘ(ರಿ), ತೆಕ್ಕಟ್ಟೆ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶ್ರೀ ಮಹಾಲಿಂಗೇಶ್ವರ ಸೌಹಾರ್ದ ಸಹಕಾರ ಸಂಘ(ರಿ), ತೆಕ್ಕಟ್ಟೆ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ

Share This
ಮಂಗಳೂರು: 2023-2028ರ ಅವಧಿಗೆ ಶ್ರೀ ಅಶೋಕ್ ಕುಮಾರ್  ಶೆಟ್ಟಿ, ಶ್ರೀ ಮಹಾಲಿಂಗೇಶ್ವರ  ಸೌಹಾರ್ದ ಸಹಕಾರ ಸಂಘ(ರಿ), ತೆಕ್ಕಟ್ಟೆ, ಕುಂದಾಪುರ ತಾಲೂಕು ಉಡುಪಿ ಜಿಲ್ಲೆ, ಇದರ ಅಧ್ಯಕ್ಷರಾಗಿ  ಆಯ್ಕೆಯಾಗಿದ್ದಾರೆ.
ಮೊದಲ ಅವಧಿಯಲ್ಲಿ 5 ತಿಂಗಳು ಅಧ್ಯಕ್ಷರಾಗಿದ್ದರು. ಈಗ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನಿವೃತ್ತ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಸಾಹಿತಿ, ಅಂಕಣಕಾರ, ಬರಹಗಾರ.

ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕರು. ವಿಶೇಷ ಮಕ್ಕಳ ಸಮನ್ವಯ ಶಿಕ್ಷಣದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿ. ಇವರು ಬರೆದ ಸಮಗ್ರ ಶಿಕ್ಷಣ, ವಿಶೇಷ ಸಾಮರ್ಥ್ಯದ ಮಕ್ಕಳು, ಅನಾವರಣ, ಎಬಿಲಿಟಿ ಬಿಯೊಂಡ್ ದಿಸಾಬಿಲಿಟಿ, ಅಶೋ ಕವನ ಪುಸ್ತಕಗಳು ಪ್ರಕಟವಾಗಿವೆ.

ಇವರ ಲೇಖನಗಳು ಅನೇಕ ದಿನ ಪತ್ರಿಕೆ, ವಾರ ಪತ್ರಿಕೆ, ಪಾಕ್ಷಿಕ ಹಾಗೂ ಮಾಸ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಆಕಾಶವಾಣಿ, ದೂರದರ್ಶನ ಹಾಗೂ ಟಿವಿ ಮಾಧ್ಯಮಗಳಲ್ಲಿ ಶಿಕ್ಷಣ ತಜ್ಞರಾಗಿ ಭಾಗವಹಿಸಿದ್ದಾರೆ. ಅನೇಕ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿದ್ದಾರೆ.

ಇವರ ಸೇವಾ ಅವಧಿಯಲ್ಲಿ ಶಾಲೆಗೆ ಅಂಗವಿಕಲರ ಸಮನ್ವಯ ಶಿಕ್ಷಣಕ್ಕೆ ಕರ್ನಾಟಕ ಸರ್ಕಾರದಿಂದ ರಾಜ್ಯ ಪ್ರಶಸ್ತಿ ಹಾಗೂ ಭಾರತ ಸರ್ಕಾರ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಅನೇಕ ಪ್ರಶಸ್ತಿ, ಪುರಸ್ಕಾರವನ್ನು ಪಡೆದಿರುವರು. ಇವರು ಉತ್ತಮ ವಾಗ್ಮಿ, ಸಂಘಟನಾ ಚತುರ, ದಕ್ಷ ಆಡಳಿತಗಾರ.

Pages